ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಷಣ ಮಾಡುತ್ತಿದ್ದ ವೇಳೆ ವಿಕೋಪ ಅಲರ್ಟ್ ಟ್ರಯಲ್ ಮೆಸೇಜ್ ಮತ್ತು ಬೀಪ್ ಸೌಂಡ್ ಬಂದಿದೆ. ಏಕಕಾಲಕ್ಕೆ ಹತ್ತಾರು ಮೊಬೈಲ್ಗಳು ಸದ್ದು ಮಾಡಿದ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೆಲಕಾಲ ಗಲಿಬಿಲಿಗೊಂಡರು. ಆಗ ಮಾಧ್ಯಮಪ್ರತಿನಿಧಿಗಳು, ಈ ಶಬ್ದ ವಿಕೋಪ ಮಾಹಿತಿ ಅಲಾರ್ಮ್ ಎಂದು ತಿಳಿಸಿದ್ದು ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟರು. ಈ ವೇಳೆ ಭಾಷಣ ಮಾಡುತ್ತಿದ್ದ ಡಿಕೆ ಶಿವಕುಮಾರ್ ಅವರು, ಬಿಜೆಪಿಯವರೂ ಅಲರ್ಟ್ ಆಗಲಿ ಬಿಡಿ ಎಂದು ನಗೆಚಟಾಕಿ ಹಾರಿಸಿದರು.