ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಅವರ ಸಹೋದರ ಪ್ರೀತಂ ನೆರವೇರಿಸಿದರು. ಈಗಾಗಲೇ ವರದಿಯಾಗಿರುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸರ್ಕಾರದ ಪ್ರತಿನಿಧಿಯಾಗಿ ಭರತ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವಿ ವಿಜಯೇಂದ್ರ ಅವರು ಭರತ್ ಮನೆಗೆ ತೆರಳಿ ತಮ್ಮ ಅಂತಿಮ ನಮನ ಸಲ್ಲಿಸಿದರು.