17 ವರ್ಷದ ತೇಜಸ್ವಿನಿ ದೊಡ್ಡಮನಿ ಎಂಬ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಕಾಲೇಜು ಸಿಬ್ಬಂದಿ ನಕಲು ಮಾಡುತ್ತಿರುವುದನ್ನು ಗಮನಿಸಿ ಪ್ರಶ್ನಿಸಿದ್ದರು. ಮನನೊಂದ ತೇಜಸ್ವಿನಿ ಕಾಣೆಯಾಗಿದ್ದು, ನಂತರ ಅವರ ಮೃತದೇಹ ಮಹಾರಾಣಿ ಕೆರೆಯಲ್ಲಿ ಪತ್ತೆಯಾಗಿದೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.