ಕರ್ನಾಟಕ ಸರ್ಕಾರ ಜಾತಿಗಣತಿ ವರದಿ ಬಿಡುಗಡೆಗೆ ಮುಂದಾಗಿರುವುದನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿರೋಧಿಸಿದ್ದಾರೆ. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳನ್ನು ನಿರ್ಲಕ್ಷಿಸಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಮಹಾಸಭಾ ಈಗಾಗಲೇ ಸಭೆ ನಡೆಸಿದೆ ಮತ್ತು ಹೋರಾಟಕ್ಕೆ ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.