ತಾನು ಬಿಜೆಪಿಗೆ ವಾಪಸ್ಸು ಬರಲು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಪಾತ್ರ ನಿರ್ವಹಿಸಿರುವರೆಂದು ಶೆಟ್ಟರ್ ಹೇಳಿದರು. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಬೇಕಿದೆ, ಅದಕ್ಕಾಗಿ ಅಳಿಲು ಸೇವೆ ಸಲ್ಲಿಸಲು ತಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.