ಪರಮಾತ್ಮ ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ

ಈ ಕಾರ್ಯಕ್ರಮ ನಡೆಯುತ್ತಿರುವ ದಿನದಂದೇ ಅಪ್ಪು ಅವರ 50ನೇ ಜನ್ಮದಿನವಾಗಿದ್ದು, ಅಗಲಿದ ಮಹಾನ್ ಚೇತನಕ್ಕೆ ಆರ್​ಸಿಬಿ ವಿಶೇಷ ಗೌರವವನ್ನು ಸಲ್ಲಿಸಿತು. ಇನ್ನು ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್​ ಕುಮಾರ್ ಸಹ ಹಾಜರಿದ್ದರು. ಇದೇ ವೇಳೆ ಗಾಯಕ ವಿಜಯಪ್ರಕಾಶ್ ಅವರು ರಾಜ್​ಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಗೀತೆಯನ್ನು ಹಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದರು.