ಹಾಸನ ಜಿಲ್ಲೆಯ ಬೇಲೂರು ಹಾಗೂ ಸಕಲೇಶಪುರ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಕಳೆದ ಕೆಲವು ವರ್ಷಗಳಿಂದ ತೀವ್ರಗೊಂಡಿದೆ. ಇದೀಗ ಸಕಲೇಶಪುರದಲ್ಲಿ ಜೀಪ್ ರ್ಯಾಲಿ ನಡೆಯುತ್ತಿದ್ದ ವೇಳೆ ಒಂಟಿ ಸಲಗವೊಂದು ವ್ಯಕ್ತಿ ಮೇಲೆ ದಾಳಿ ನಡೆಸಿದೆ. ಆನೆ ಅಟ್ಟಾಡಿಸಿಕೊಂಡು ಹೋಗಿ ದಾಳಿ ಮಾಡುತ್ತಿರುವ ರಣಭೀಕರ ವಿಡಿಯೋ ಈಗ ವೈರಲ್ ಆಗುತ್ತಿದೆ.