ಜಮೀನು ವಿವಾದ; ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಜಮೀನು ವಿವಾದದಿಂದ ಕೋಪಗೊಂಡ ರಿಕ್ಷಾ ಚಾಲಕ ಬಿಆರ್‌ಎಸ್ ನಾಯಕಿಯ ಪತಿಗೆ ಸುತ್ತಿಗೆಯಿಂದ ಹೊಡೆದು, ಹಲ್ಲೆ ನಡೆಸಿದ್ದಾನೆ. ಸೋಮವಾರ ನಿಜಾಮಾಬಾದ್‌ನ ಸ್ಥಳೀಯ ಕಾರ್ಪೊರೇಟರ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಅವರ ತಲೆಗೆ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.