ಕೇಂದ್ರ ಸರ್ಕಾರ ಕೂಡಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ರಾಷ್ಟ್ರೀಯ ಯೋಜನೆ ಅಂತ ಘೋಷಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ತಮ್ಮ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸಲು ಬದ್ಧವಾಗಿ ಎಂದ ಮುಖ್ಯಮಂತ್ರಿ, ಕಾಮಗಾರಿ ಈಗಾಗಲೇ ಆರಂಭಗೊಂಡಿದೆ ಅಂತ ಹೇಳಿದರು.