ಜೈಲಿನಲ್ಲಿ ನಟ ದರ್ಶನ್ ಮತ್ತು ಬೇರೆ ಕುಖ್ಯಾತ ರೌಡಿಗಳಿಗೆ ರಾಜಾತಿಥ್ಯ ನೀಡಿರುವುದಕ್ಕೆ ಸಂಬಂಧಿಸಿದಂತೆ 7 ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಮತ್ತು ಉನ್ನತಾಧಿಕಾರಿಗಳ ಪಾತ್ರ ಕಂಡು ಬಂದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.