ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಅರ್ಧಗಂಟೆ ಕಾಲ ಸುರಿದ ಮಳೆ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ತಂಪು ನೀಡಿದೆ. ಆಲಿಕಲ್ಲು ಮಳೆಯಿಂದಾಗಿ ಜನರು ಸಂತೋಷ ವ್ಯಕ್ತಪಡಿಸಿದ್ದಾರೆ. ವರ್ಷದ ಮೊದಲ ಮಳೆಗೆ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.