ಎಸ್ ಟಿ ಸೋಮಶೇಖರ್, ಶಾಸಕ

ತಾನು 10 ವರ್ಷಗಳಿಂದ ಶಾಸಕ ಮತ್ತು ಮಂತ್ರಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದ ಭಾಗವಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದಾಗಿ ಹೇಳಿದ ಸೋಮಶೇಖರ್, ಈ ಎಲ್ಲ ಅವಧಿಯಲ್ಲಿ ಒಂದೇ ಗಲಭೆ ನಡೆದಿಲ್ಲ, ಆದರೆ ಈ ಸಲ ಟಿಕೆಟ್ ಗಿಟ್ಟಿಸಿರುವ ಶೋಭಾ ಕರಂದ್ಲಾಜೆ ಅಲ್ಲಿಂದ ಗೆಲ್ಲುವ ಮೊದಲೇ ಅಸಂಬದ್ಧ ಮತ್ತು ಮತೀಯ ಗಲಾಟೆಗಳಿಗೆ ಉತ್ತೇಜನ ನೀಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಸೋಮಶೇಖರ್ ಹೇಳಿದರು,