ಮೈಸೂರು, ಜುಲೈ 02: ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಇಬ್ಬರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಬಿಜೆಪಿ ಶಾಸಕ ಶ್ರೀವತ್ಸ ಮಾನವೀಯತೆ ಮೆರೆದಿದ್ದಾರೆ. ಘಟನೆ ಸಂಭವಿಸಿದ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಕಂಡು ಆಟೋದಲ್ಲಿ ಬಾಲಕಿಯರನ್ನು ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ.