ಬೆಂಗಳೂರಲ್ಲಿ ಕೆ ಅಣ್ಣಾಮಲೈ ಪ್ರಚಾರ

ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ನೀಡಿ ಚುನಾವಣೆ ಗೆದ್ದಿರಬಹುದು, ಅದರೆ ಈ ಬಾರಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಗಾಳಿ ಬದಲಾಗಿದೆ ಎಂದು ಅಣ್ಣಾಮಲೈ ಹೇಳಿದರು. ಕಾಂಗ್ರೆಸ್ ನವರು ಚೊಂಬಿನ ಪೋಸ್ಟರ್ ಗಳೊಂದಿಗೆ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಜನ ಅದನ್ನು ತಮಾಷೆಯಾಗಿ ನೋಡುತ್ತಿದ್ದಾರೆ ಎಂದರು.