ರಾಜ್ಯದ ರೈತರು ಮತ್ತು ಜನರ ಬಗ್ಗೆ ಅವರಿಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ತಮ್ಮೊಂದಿಗೆ ಕೈ ಜೋಡಿಸುತ್ತಿದ್ದರು. ಅದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಸಿಗದಿರುವುದು ಕಂಡು ಅವರು ವಿಕೃತಾನಂದ ಅನುಭವಿಸುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ವಿಘ್ನ ಸಂತೋಷಿಗಳು, ರಾಜ್ಯದಲ್ಲಿ ಅವರು ಸರ್ಕಾರ ನಡೆಸುತ್ತಿದ್ದಾಗ, ಅವರಪ್ಪನ ಮನೆಯಿಂದ ಹಣ ತರುತ್ತಿದ್ದರೇ ಎಂದು ರೆಡ್ಡಿ ಉಗ್ರರಾಗಿ ಪ್ರಶ್ನಿಸಿದರು.