ರಾಜಕಾರಣದಲ್ಲಿ ಇನ್ನೂ ಪಳಗಬೇಕಿರುವ ಮತ್ತು ಈ ಕ್ಷೇತ್ರದಲ್ಲಿ ಇದುವರೆಗೆ ಗಮನ ಸೆಳೆಯುವ ಯಾವುದೇ ಸಾಧನೆ ಮಾಡದ ನಿಖಿಲ್ ಕುಮಾರಸ್ವಾಮಿ ಮೇಲೆ ಕುಮಾರಸ್ವಾಮಿ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಿರುವಂತಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯಕರ್ತರೊಂದಿಗೆ ನಿಖಿಲ್ ಸಭೆಗಳನ್ನು ನಡೆಸುತ್ತಿದ್ದಾರೆಯೇ ಹೊರತು ಕುಮಾರಸ್ವಾಮಿ ಅಲ್ಲ. ಬಿಜೆಪಿ ಜೊತೆ ಹೊಂದಾಂಣಿಕೆ ಮಾಡಿಕೊಂಡಿದ್ದು ಪಕ್ಷದ ಅನೇಕ ಕಾರ್ಯಕರ್ತಯರಿಗೆ ಇಷ್ಟವಾಗಿರದ ಕಾರಣ ಅವರಿಗೆ ಮುಖ ತೋರಿಸಲು ಕುಮಾರಸ್ವಾಮಿ ಹಿಂಜರಿಯುತ್ತಿದ್ದಾರೆಯೇ?