ಬೆಂಗಳೂರು, ಆಗಸ್ಟ್ 14: ನಾನು ಈ ಮಟ್ಟಕ್ಕೆ ಬೆಳೆಯಲು ನೂರಕ್ಕೆ ನೂರರಷ್ಟು ಡಿ.ಕೆ.ಶಿವಕುಮಾರ್ ಕಾರಣ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಕೆಂಪೇಗೌಡ ಬಡಾವಣೆ ವೀಕ್ಷಣೆ ವೇಳೆ ಡಿಸಿಎಂ ಅವರನ್ನು ಹೊಗರಳಿದ ಸೋಮಶೇಖರ್, ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರು ಡಿ.ಕೆ.ಶಿವಕುಮಾರ್ ಕಾರಣ. ಉತ್ತರಹಳ್ಳಿ ಕ್ಷೇತ್ರದ ಶಾಸಕ ಆಗಬೇಕೆಂದು ನನ್ನ ಹೆಸರು ಘೋಷಿಸಿದ್ದರು. ಆಗ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು ಡಿ.ಕೆ.ಶಿವಕುಮಾರ್. ಅವರ ಶ್ರಮದಿಂದ ನಾನು ಇಂತಹ ವೇದಿಕೆಯಲ್ಲಿ ಮಾತನಾಡುತ್ತಿದ್ದೇನೆ. ಡಿ.ಕೆ.ಶಿವಕುಮಾರ್ ಮೇಲೆ ಬೆಂಗಳೂರಿನ ಜನ ವಿಶ್ವಾಸ ಇಟ್ಟಿದ್ದಾರೆ. ಅದರಂತೆ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.