ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ದಲಿತ ವಿದ್ಯಾರ್ಥಿಗಳು ಬಳಸಿದ ತಟ್ಟೆಗಳನ್ನು ತೊಳೆಯಲು ಅಡುಗೆ ಸಿಬ್ಬಂದಿ ನಿರಾಕರಿಸಿದ ಘಟನೆ ನಡೆದಿದೆ. 3000 ರೂ. ವೇತನ ಪಡೆಯುವ ಅಡುಗೆ ಸಿಬ್ಬಂದಿ, ದಲಿತ ಮಕ್ಕಳ ತಟ್ಟೆ ತೊಳೆಯಲು ನಿರಾಕರಿಸಿ ಅಡುಗೆ ಮನೆಗೆ ಬೀಗ ಹಾಕಿದ್ದಾರೆ. ಇದರಿಂದಾಗಿ ಮೂರು ದಿನಗಳಿಂದ ಬಿಸಿಯೂಟ ಸ್ಥಗಿತವಾಗಿದೆ. ದಲಿತ ಮುಖಂಡರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ.