ಲಕ್ಷ್ಮೀ ಪೂಜೆ ಬಳಿಕ‌ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ

ಲಕ್ಷ್ಮೀ ಪೂಜೆ ಬಳಿಕ‌ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿರುವಂತಹ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಸಿದ್ದರಾಯ ಆಡಿನ ಗಾಳಿಯಲ್ಲಿ ಗುಂಡುಹಾರಿಸಿದ ವ್ಯಕ್ತಿ. ಲೈಸೆನ್ಸ್‌ ಹೊಂದಿದ್ದ ಪಿಸ್ತೂಲ್‌ನಿಂದ ಒಂದು ಸುತ್ತು ಫೈರಿಂಗ್​ ಮಾಡಲಾಗಿದೆ. ಫೈರಿಂಗ್‌ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.