ಶಾರ್ಟ್ ಸರ್ಕ್ಯೂಟ್​ನಿಂದ ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಬೆಂಕಿ

ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್​​ ಇಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕೆ.ಆರ್.ಪೇಟೆ ಡಿಪೋಗೆ ಸೇರಿದ ಸಾರಿಗೆ ಬಸ್​​ ಅವಘಡ ಸಂಭವಿಸಿದ್ದು, ಕೂಡಲೇ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.