ಠಾಣೆಗೆ ಕರೆಸಿ ಬಿಜೆಪಿ ಕಾರ್ಯಕರ್ತರಿಗೆ ಥಳಿತ ಆರೋಪ: ಪೊಲೀಸ್ ಅಧಿಕಾರಿಗೆ ಬೆವರಿಳಿಸಿದ ಪ್ರಲ್ಹಾದ್ ಜೋಶಿ

ಸುಖಾಸುಮ್ಮನೆ ಠಾಣೆಗೆ ಕರೆಸಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಿದ ಆರೋಪ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಧಾರವಾಡದ ಶಹರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಅವರನ್ನು ಹುಬ್ಬಳ್ಳಿಯ ತಮ್ಮ ನಿವಾಸಕ್ಕೆ ಕರೆಸಿ ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಧಾರವಾಡದ ಗೊಲ್ಲರ ಓಣಿ ನಿವಾಸಿ ರವಿ ಗೊಲ್ಲರ ಎಂಬ ಕಟ್ಟರ್ ಬಿಜೆಪಿ ಕಾರ್ಯಕರ್ತನಿಗೆ ಥಳಿಸಿದ ಆರೋಪ ಕೇಳಿಬಂದಿದೆ.