ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ

ಎರಡು ದಿನಗಳ ಹಿಂದಷ್ಟೇ ನಾವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಗ್ಗೆ ವಿಡಿಯೋ ವರದಿಯೊಂದನ್ನು ನೀಡಿದ್ದೇವೆ. ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಪತ್ನಿ ಉಷಾ ಶಿವಕುಮಾರ್ ಮತ್ತು ಮಗನೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯನಿಗೆ ಮಹಾಪೂಜೆ ಮತ್ತು ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಬಗ್ಗೆ ವರದಿ ಮಾಡಲಾಗಿತ್ತು. ಅವತ್ತು ಸಹ ಶ್ರೀಕ್ಷೇತ್ರದಲ್ಲಿ ಮೋಡಕವಿದ ವಾತಾವರಣವಿತ್ತು.