ಜನರ ಧೋರಣೆ ನೋಡುತ್ತಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ರಾಜ್ಯದ ಎಲ್ಲ 28 ಸ್ಥಾನಗಳು ಸಿಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಮ್ಮ ಹಳೆಯ ಶಿಷ್ಯ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಉಲ್ಲೇಖಿಸಿದ ಯಡಿಯೂರಪ್ಪ, ಅವರು ಬಿಜೆಪಿಗೆ ವಾಪಸ್ಸು ಬಂದಿರೋದು ಈ ಭಾಗದಲ್ಲಿ ಪಕ್ಷಕ್ಕೆ ಆನೆಬಲ ತಂದಿದೆ ಎಂದರು.