ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ

ಇಂದಿನಿಂದ ಚಾರ್​ಧಾಮ್ ಯಾತ್ರೆ ಆರಂಭಗೊಳ್ಳಲಿದೆ. ಮುಂದಿನ 6 ತಿಂಗಳ ಕಾಲ ಯಾತ್ರಿಕರು ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತದೆ. ವಾಸ್ತವವಾಗಿ, ಚಾರ್‌ಧಾಮ್ ಯಾತ್ರೆಯು ಜಗತ್ತಿನ ಅತ್ಯಂತ ಪವಿತ್ರ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಕೇದಾರನಾಥ ಧಾಮವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ ಮತ್ತು ಇದು ಶಿವನಿಗೆ ಅರ್ಪಿತವಾಗಿದೆ. ಬದರಿನಾಥ ಧಾಮವು ವಿಷ್ಣುವಿಗೆ ಅರ್ಪಿತವಾಗಿದೆ.