ಕನ್ನಡ ಚಿತ್ರರಂಗಕ್ಕೆ ಈಗ ಕಷ್ಟ ಕಾಲ. ನಿರೀಕ್ಷಿತ ಮಟ್ಟದಲ್ಲಿ ಸಿನಿಮಾಗಳು ಗೆಲ್ಲುತ್ತಿಲ್ಲ. ಹಾಗಾಗಿ ಪೂಜೆ, ಹೋಮ ಮಾಡಿಸಲಾಗಿದೆ. ಇಂದು (ಆಗಸ್ಟ್ 14) ಕಲಾವಿದರ ಸಂಘದಲ್ಲಿ ಹೋಮ ನಡೆದಿದೆ. ಇದರಲ್ಲಿ ಸಮಲತಾ ಅಂಬರೀಷ್ ಭಾಗಿಯಾಗಿದ್ದಾರೆ. ಸ್ಯಾಂಡಲ್ವುಡ್ನ ಒಳಿತಿಗಾಗಿ ಈ ಪೂಜೆ ಮಾಡಲಾಗಿದ್ದರೂ ಕೂಡ ಪ್ರಮುಖ ಸ್ಟಾರ್ ಕಲಾವಿದರು ಬಾರದೇ ಇರುವುದರ ಬಗ್ಗೆ ಸಮಲತಾ ಮಾತನಾಡಿದ್ದಾರೆ. ‘ಇದು ಸ್ವಲ್ಪ ಬೇಜಾರಿನ ವಿಷಯ. ಅಂಬರೀಷ್ ಅವರ 20 ವರ್ಷದ ಶ್ರಮದಿಂದ ಈ ಕಲಾವಿದರ ಭವನ ಆಗಿದೆ. ಅವರು ಅಷ್ಟು ಕಷ್ಟಪಟ್ಟಿದ್ದರು. ಇದು ರಾಜ್ಕುಮಾರ್ ಅವರ ಕನಸಾಗಿತ್ತು. ಕಲಾವಿದರೆಲ್ಲ ಇದನ್ನು ಬಳಸಿಕೊಳ್ಳಬೇಕು ಅಂತ ಅವರು ಹೇಳಿದ್ದರು. ಉಳಿದಿದ್ದು ಕಲಾವಿದರಿಗೆ ಬಿಟ್ಟಿದ್ದು’ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.