ರಾಜ್ಯದಲ್ಲಿ ಆಡಳಿತ ನಡೆಸಿರುವ ಎಲ್ಲ ಸರ್ಕಾರಗಳು ಸರ್ಕಾರೀ ಜಮೀನುಗಳ ಅತಿಕ್ರಮಣ ತೆರವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬಂದಿವೆ ಮತ್ತು ತಮ್ಮ ಸರಕಾರವೂ ಆ ಪ್ರಕ್ರಿಯೆಯನ್ನು ಜಾರಿಯಲ್ಲಿಡುತ್ತದೆ ಎಂದು ಶಿವಕುಮಾರ್ ಹೇಳಿದರು. ಬಿಡಿಎ ಮತ್ತು ಬಿಬಿಎಂಪಿ ಜಾಗಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.