ಉಡುಪಿ, ಆಗಸ್ಟ್ 1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉಡುಪಿ ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ. ಉಡುಪಿಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್ಗೆ ಸಿಎಂ ದಿಢೀರ್ ಭೇಟಿ ಕೊಟ್ಟಿದ್ದಾರೆ. ಅಲ್ಲಿನ ಮೆಟ್ರಿಕ್ ನಂತರದ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದರು. ನಿಮಗೆ ಹಣ ಸಿಗಲ್ಲ, ನಿಮ್ಮ ಅಮ್ಮನಿಗೆ ಹಣ ಸಿಗುತ್ತೆ ಎಂದು ಸಿಎಂ ಹೇಳಿದರು. ಡಿಗ್ರಿ ಪಾಸಾದ ಮೇಲೆ ಕೆಲಸ ಸಿಗುವ ತನಕ ಯುವನಿಧಿ ನೀಡ್ತೇವೆ. ನಿಮ್ಮ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹಾಸ್ಟೆಲ್ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಿದ್ದರು.