ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರ ಮಾಡುತ್ತಿರುವ ವೇಳೆ ಸಚಿವ ಜಮೀರ್ ಅಹ್ಮದ್ ಹೆಚ್ಡಿ ಕುಮಾರಸ್ವಾಮಿ ಅವರನ್ನು "ಕರಿಯ ಕುಮಾರಸ್ವಾಮಿ" ಅಂತ ಸಂಬೋಧಿಸಿದ್ದರು. ಇದರಿಂದ ಜೆಡಿಎಸ್ ಕಾರ್ಯಕರ್ತರು, ನಾಯಕರು ಆಕ್ರೋಶಗೊಂಡಿದ್ದರು. ಇದೀಗ ಜಮೀರ್ ಅಹ್ಮದ್ ಕ್ಷಮೆಯಾಚಿಸಿದ್ದಾರೆ.