ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ

ದಿನದಿಂದ ದಿನಕ್ಕೆ ದರ್ಶನ್ ಅವರ ಬೆನ್ನು ನೋವು ಜಾಸ್ತಿ ಆಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ಅವರು ತುಂಬ ಕಷ್ಟಪಟ್ಟು ನಡೆಯುತ್ತಿದ್ದಾರೆ. ಆದಷ್ಟು ಬೇಗ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅನಾರೋಗ್ಯದ ಕಾರಣದಿಂದ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ಜಾಮೀನು ಅರ್ಜಿ ವಿಚಾರಣೆ ಅ.29ಕ್ಕೆ ಮುಂದೂಡಲಾಗಿದೆ.