ಸಿನಿಮಾದ ಪ್ರಚಾರಕ್ಕಾಗಿ ಹಲವು ತಂತ್ರಗಳನ್ನು ಮಾಡಲಾಗುತ್ತದೆ. ಕಿರಣ್ ರಾಜ್ ಕೂಡ ಅದೇ ಹಾದಿ ತುಳಿದಿದ್ದಾರಾ ಎಂಬ ಪ್ರಶ್ನೆ ಕೆಲವರಲ್ಲಿ ಮೂಡಿದೆ. ಈ ಕುರಿತು ಅವರ ಆಪ್ತರು ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಅಪಘಾತ ಆಗಿದ್ದು ಎಲ್ಲಿ ಮತ್ತು ಯಾವಾಗ ಎಂಬ ಬಗ್ಗೆ ಗಿರೀಶ್ ಅವರು ಮಾಹಿತಿ ನೀಡಿದ್ದಾರೆ. ಗಿಮಿಕ್ ಬಗ್ಗೆ ಎದುರಾದ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ.