ಶಿವಕುಮಾರ್ ಅವರನ್ನು ಟ್ರಬಲ್ ಶೂಟರ್ ಅಂತ ಕರೆಯುತ್ತಾರೆ. ಸರ್ಕಾರ ಅಥವಾ ಪಕ್ಷ ಸಂಕಷ್ಟದಲ್ಲಿದ್ದಾಗ, ಪಾರುಮಾಡುವ ಹೊಣೆಗಾರಿಕೆಯನ್ನು ಅವರಿಗೆ ವಹಿಸಲಾಗುತ್ತದೆ. ಐದು ರಾಜ್ಯಗಳ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಪಯತ್ನ ನಡೆದಲ್ಲಿ ಮತ್ತು ಅದನ್ನು ತಡೆಯಲು ಪಕ್ಷದ ಹೈಕಮಾಂಡ್ ತನಗೆ ಜವಾಬ್ದಾರಿ ವಹಿಸಿದಲ್ಲಿ ನಿಭಾಯಿಸುವುದಾಗಿ ಶಿವಕುಮಾರ್ ಹೇಳಿದರು.