ಬಿಜೆಪಿ ಧುರೀಣ ಸಿಪಿ ಯೋಗೇಶ್ವರ್

ಯೋಗೇಶ್ವರ್ ಮಾತುಗಳನ್ನು ಕೇಳುತ್ತಿದ್ದರೆ, ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಡಿಕೆ ಶಿವಕುಮಾರ್ ಬಿಜೆಪಿ ಧುರೀಣನಿಗೆ ಗಾಳ ಹಾಕಿದಂತಿದೆ. ಯೋಗೇಶ್ವರ್ ಮಾತುಗಳಲ್ಲಿ ಬಂಡಾಯದ ಛಾಯೆ ಮತ್ತು ಅಸಹನೆಯನ್ನು ಗುರುತಿಸಬಹುದು. ಕುಮಾರಸ್ವಾಮಿ ತಮ್ಮ ಹಠ ಸಾಧಿಸಿದರೆ, ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಅಚ್ಚರಿಯಿಲ್ಲ.