ವಿರೋಧ ಪಕ್ಷದ ನಾಯಕರಾಗಿರುವ ಅಶೋಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗ ಮಾತಾಡಲಾರಂಬಿಸುತ್ತಾರೋ ಎಂದು ಜನ ನೋಡುತ್ತಿದ್ದಾರೆ. ಆದರೆ ಅವರಿನ್ನೂ ಲೋಕಸಭಾ ಚುನಾವಣೆಯ ಗುಂಗಿನಲ್ಲಿದ್ದಾರೆ. ಇಷ್ಟರಲ್ಲೇ ವಿಧಾನಸಭಾ ಅಧಿವೇಶನ ಶುರುವಾಗಲಿದೆ, ಆಡಳಿತ ಪಕ್ಷದ ವೈಫಲ್ಯಗಳನ್ನು ಪಟ್ಟಿ ಮಾಡಿಕೊಂಡು ಅದನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಡೆ ಅಶೋಕ ಗಮನಹರಿಸಿದರೆ ಒಳ್ಳೇದು ಅಂತ ಜನ ಅಂದುಕೊಳ್ಳುತ್ತಿದ್ದಾರೆ.