ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗದ ಕಾರಣ ಕಾಂಗ್ರೆಸ್ ಶಾಸಕರು ತಮ್ಮ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಮತ್ತು ಯಾಕಾದರೂ ನಮ್ಮ ಪಕ್ಷ ಅಧಿಕಾರಕ್ಕೆ ಬಂತೋ ಅಂತ ಪರಿತಪಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಉರುಳಲು ಅವರೇ ಕಾರಣರಾಗಲಿದ್ದಾರೆ. ಸರ್ಕಾರದ ಸುಳ್ಳು ಮತ್ತು ಭ್ರಷ್ಟಾಚಾರದಿಂದ ಜನ ಕೂಡ ಬೇಸತ್ತಿದ್ದಾರೆ ಎಂದು ಅಶೋಕ ಹೇಳಿದರು.