ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ಎಲ್ಲ 31ಜಿಲ್ಲೆಗಳಲ್ಲಿ ಮೇ ತಿಂಗಳ ಮುಂಗಾರು ಮಳೆ ವಾಡಿಕೆಗಿಂತ ಜಾಸ್ತಿಯಾಗಿದೆ. ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಬಿತ್ತನೆ ಬೀಜ, ಗೊಬ್ಬರ ಯಾವುದಕ್ಕೂ ಕೊರತೆಯಿಲ್ಲ, ರೈತರು ಆತಂಕಪಡುವ ಆವಶ್ಯಕತೆಯಿಲ್ಲ, ಅವರು ಬಿತ್ತುವಷ್ಟು ಬೀಜಗಳನ್ನು ಪೂರೈಸಲಾಗುವುದು ಎಂದು ಸಚಿವ ಹೇಳಿದರು.