ಹಾಸ್ಟೆಲ್ ವಿದ್ಯಾರ್ಥಿಗಳ ಆಕ್ರೋಶ

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹಾದೇವಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರಳಿನಂತೆ ಅವರ ಹಿಂದೆ ಸುತ್ತುವುದನ್ನು ಬಿಟ್ಟು ರಾಜ್ಯದ ಹಾಸ್ಟೆಲ್ ಗಳಲ್ಲಿ ಏನು ನಡೆಯುತ್ತಿದೆ, ಮಕ್ಕಳಿಗೆ ಊಟ-ತಿಂಡಿ ಸಿಗುತ್ತಿದೆಯಾ, ಶೌಚಾಲಯಗಳು ಓರಣವಾಗಿವೆಯಾ ಮೊದಲಾದ ಸಂಗತಿಗಳ ಕಡೆ ಗಮನ ಹರಿಸಬೇಕು. ಸಚಿವನಾಗಿ ಒಂದು ವರ್ಷ ಕಳೆಯುತ್ತಾ ಬಂದಿದೆ, ಈ ಅವಧಿಯಲ್ಲಿ ಅವರು ತಮ್ಮ ಇಲಾಖೆಗೆ ಸಂಬಂಧಿಸಿದ ಹೇಳಿಕೆಗಳನ್ನು ನೀಡಿರುವುದು ಕನ್ನಡಿಗರು ಗಮನಿಸಿಲ್ಲ.