ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಮತ್ತು ಕೆಪಿ ನಂಜುಂಡಿ

ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ನಿನ್ನೆಯಷ್ಟೇ ಧಾರವಾಡಲ್ಲಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಮನೆಗೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದರು. ನಂಜುಂಡಿ ಅವರು ಪಕ್ಷಕ್ಕೆ ವಾಪಸ್ಸಾದರೆ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದರು, ಅವರ ಸೂಚನೆಯಂತೆ ತಾನು ನಂಜುಂಡಿಯವರೊಂದಿಗೆ ಕಳೆದ ವಾರ ಮಾತುಕತೆ ನಡೆಸಿದ್ದೆ ಎಂದು ಶಿವಕುಮಾರ್ ಹೇಳಿದರು.