ಈಗ ಜನರು ಒಟಿಟಿಯಲ್ಲಿ ಹೆಚ್ಚು ಮನರಂಜನೆ ಬಯಸುತ್ತಿದ್ದಾರೆ. ಚಿತ್ರಮಂದಿರಕ್ಕೆ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಬರುತ್ತಿಲ್ಲ. ಹಾಗಂತ ಜನರನ್ನು ದೂಷಿಸಲು ಸಾಧ್ಯವಿಲ್ಲ ಎಂಬುದು ಉಪೇಂದ್ರ ಅವರ ಅಭಿಪ್ರಾಯ. ಆ ಕುರಿತು ಅವರು ಮಾತನಾಡಿದ್ದಾರೆ. ‘ಎ’ ಸಿನಿಮಾ ಮರು ಬಿಡುಗಡೆ ಆಗಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಸಂದರ್ಶನ ನೀಡಿದ್ದಾರೆ.