ಗಮನಿಸಬೇಕಾದ ಸಂಗತಿಯೆಂದರೆ ಇವರಿಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕವಿಲ್ಲ. ಆದರೆ ಅವರ ಉದ್ದೇಶ ಏನಾಗಿತ್ತು ಅನ್ನೋದು ಸ್ಪಷ್ಟವಾಗುತ್ತಿಲ್ಲ. ಬಣ್ಣದ ಹೊಗೆಯುಗುಳುವ ಪಟಾಕಿಗಳಿಂದ ಅವರು ಸರ್ಕಾರದ ಗಮನವನ್ನು ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರೇ? ಆಥವಾ ಸುಮ್ಮನೆ ಬಿಟ್ಟಿ ಪ್ರಚಾರ ಗಿಟ್ಟಿಸುವ ಉದ್ದೇಶವೇ? ಅದೇನೆ ಇದ್ದರೂ ಇದು ಭಾರಿ ಪ್ರಮಾಣದ ಭದ್ರತಾ ಲೋಪ ಅನ್ನೋದು ಸುಳ್ಳಲ್ಲ.