ದರ್ಶನ್​ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ: ರೇಣುಕಾಸ್ವಾಮಿ ತಂದೆ ಬೇಸರ

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿ ಜೈಲು ಸೇರಿರುವ ದರ್ಶನ್ ಕೂಡ ಇದೇ ಕಾರಾಗೃಹದಲ್ಲಿದ್ದಾರೆ. ಇದೀಗ ದರ್ಶನ್ ಜೈಲಿನಲ್ಲಿ ಕಾಫಿ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್​ ಆಗಿದೆ. ಫೋಟೋ ನೋಡಿದ ಮೃತ ರೇಣುಕಾಸ್ವಾಮಿ ಕುಟುಂಬ, ಜೈಲಧಿಕಾರಿಗಳ ವಿರುದ್ಧ ಕಿಡಿಕಾರಿದೆ. ಸಿಬಿಐಗೆ ವಹಿಸಬೇಕು ಅಂತಾ ಒತ್ತಾಯಿಸಿದ್ದಾರೆ.