ಪ್ರತಿಯೊಬ್ಬ ವ್ಯಕ್ತಿ ಮನುಷ್ಯತ್ವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಭಾವೈಕ್ಯತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತನ್ನಂತೆ ಬೇರೆಯವರು ಸಹ ಮನುಷ್ಯರು ಎಂಬ ಧೋರಣೆ ರೂಢಿಸಿಕೊಂಡು ದ್ವೇಷ, ಅಸೂಯೆಗಳನ್ನು ಬದಿಗಿಟ್ಟು ಸೌಹಾರ್ದತೆಯಿಂದ ಬಾಳ್ವೆ ನಡೆಸಬೇಕು ಎಂದು ಅವರು ಹೇಳಿದರು.