ಡಿಕೆ ಸುರೇಶ್, ಸೌಮ್ಯ ರೆಡ್ಡಿ, ಪ್ರೊಫೆಸರ್ ರಾಜೀವ್ ಗೌಡ ಮೊದಲಾದ ಪ್ರಮುಖರು ಸೋತಿದ್ದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಯಿತು. ದಕ್ಷಿಣ ಕರ್ನಾಟಕದಲ್ಲಿ ಪಕ್ಷದ ಪ್ರದರ್ಶನ ಕಳಾಹೀನ ಅಂತ ಹೇಳಿದರೂ ಅದು ಅಂಡರ್ ಸ್ಟೇಟ್ಮೆಂಟ್. ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಮಾತಾಡಿಕೊಳ್ಳಲಾರಂಭಿಸಿದ್ದಾರೆ.