ಪಂಚಮಸಾಲಿ ಸಮುದಾಯದ ಪ್ರತಿಭಟನೆ

ಬಸವ ಜಯ ಮೃತ್ಯುಂಜಯ ಸ್ವಾಮೀಜಿಯರು ಸಹ ಪ್ರತಿಭಟನೆಕಾರನ್ನು ಜೊತೆಗೂಡಿದಾಗ ನಮ್ಮ ಬೆಳಗಾವಿ ಪ್ರತಿನಿಧಿ ಅವರೊಂದಿಗೆ ಮಾತಾಡಿದರು. ಇವತ್ತು ರಾಜ್ಯದ ಎಲ್ಲ ಜಿಲ್ಲಾಕೇಂದ್ರ, ತಾಲೂಕು, ಹೋಬಳಿ ಮತ್ತು ಹಳ್ಳಿಗಳಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ಮಾಡಿ ರಸ್ತೆಗಳನ್ನು ಬಂದ್ ಮಾಡುತ್ತಿದ್ದಾರೆ, ಸುಮಾರು 10 ಲಕ್ಷ ಜನ ಭಾಗಿಯಾಗಿದ್ದಾರೆ, ನಮ್ಮದು ಶಾಂತಿಯುತವಾದ ಪ್ರತಿಭಟನೆ ಎಂದು ಹೇಳಿದರು.