ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿನ ಮಹಾಕುಂಭದ ಕಾಲ್ತುಳಿತದ ಘಟನೆಯನ್ನು 'ದೊಡ್ಡ ವಿಷಯವೇನಲ್ಲ' ಎಂದಿರುವ ಬಿಜೆಪಿ ಸಂಸದೆ ಹೇಮಾಮಾಲಿನಿ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಯಾಗರಾಜ್ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಕೆಲವು ದಿನಗಳ ನಂತರ ನಟಿ ಮತ್ತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಈ ಹೇಳಿಕೆ ನೀಡಿದ್ದಾರೆ.