ತಮ್ಮ ಭೇಟಿಯ ನಂತರ ಅವಶ್ಯಕತೆ ಅನಿಸಿದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ ನಡುವೆ ಮಾತುಕತೆ ನಡೆಯಲಿದೆ ಎಂದು ಚನ್ನಪಟ್ಟಣ ಶಾಸಕ ಹೇಳಿದರು. ಸಭೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆ ಸಂದರ್ಭದಲ್ಲಿನ ಸ್ಥಿತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಅವಲೋಕನ ನಡೆಸಲಾಗುವುದು ಅಂತ ಅವರು ಹೇಳಿದರು.