ಬೆಂಗಳೂರಿನ ಚಾಮರಾಜಪೇಟೆಯಲ್ಲಿ ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಹಸುಗಳ ಕೆಚ್ಚಲು ಕೊಯ್ದಿರುವುದಕ್ಕೆ ಪ್ರತಿಕ್ರಿಯೆ ನೀಡಿದ ತನ್ವೀರ್ ಸೇಟ್, ಒಂದು ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ಹೆತ್ತ ತಾಯಿಗೆ ದ್ರೋಹ ಬಗೆದಂತೆ, ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಬಿಜೆಪಿಯವರ ಪ್ರವೃತ್ತಿ, ತಪ್ಪಿತಸ್ಥನನ್ನು ಈಗಾಗಲೇ ಬಂಧಿಸಲಾಗಿದೆ, ಅವನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದರು.