ನೇಹಾ ಹಿರೇಮಠ ಮನೆ ಬಳಿ ಪೊಲೀಸ್ ಭದ್ರತೆ

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಂದೀಪ್ ಸುರ್ಜೆವಾಲಾ ನಿನ್ನೆ ನಿರಂಜನ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರದಂದು ನಿರಂಜನ ಮನೆಗೆ ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ನಿರಂಜನ ಕುಟುಂಬದೊಂದಿಗೆ ಮಾತಾಡಿದ ಬಳಿಕ ಹಾವೇರಿ ಜಿಲ್ಲೆಯ ತಡಸ ಕ್ರಾಸ್ ಬಳಿ ಆಯೋಜಿಸಲಾಗಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.