ಮೊನ್ನೆಯವರೆಗೆ ತಮ್ಮ ಪಕ್ಷದ ನಾಯಕರನ್ನೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದ ರೇಣುಕಾಚಾರ್ಯ ಬಹಿರಂಗವಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದರು. ಅವರು ಯಡಿಯೂರಪ್ಪರ ಕಟ್ಟಾ ಬೆಂಬಲಿಗ ಅಂತ ಎಲ್ಲರಿಗೂ ಗೊತ್ತು. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದಕ್ಕೆ ಖುಷಿಯಾಗಿ ನಿಮುವು ಬದಲಿಸಿದರೇ?