ಡಾ ಸಿಎನ್ ಮಂಜುನಾಥ್

ಎಲ್ಲ ಕಡೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಮೊನ್ನೆ ಪಕ್ಷದ ವರಿಷ್ಠರಾದ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ನಡೆಸಿದ ರೋಡ್ ಶೋ ಅಭೂತಪೂರ್ವ ಯಶ ಕಂಡಿದೆ, ಹೀಗಾಗಿ ದಿನೇದಿನೆ ತಮ್ಮ ಆತ್ಮವಿಶ್ವಾಸ ಹೆಚ್ಚುತ್ತಿದೆ ಎಂದು ಮಂಜುನಾಥ್ ಹೇಳಿದರು. ಡಿಕೆ ಸಹೋದರರು ಮಾಡುವ ಕಾಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಮಂಜುನಾಥ್ ಅದಕ್ಕೆಲ್ಲ ಮತದಾರರೇ ಉತ್ತರ ನೀಡುತ್ತಾರೆ ಎಂದು ಅವರು ಹೇಳಿದರು.