ಕೊಲೆ ಆರೋಪಿ ದರ್ಶನ್​ ನೋಡಲು ಕಿಕ್ಕಿರಿದು ಸೇರಿದ ಜನರಿಗೆ ಪೊಲೀಸ್​ ಲಾಠಿ ರುಚಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪ ದರ್ಶನ್​ ಮೇಲಿದೆ. ಸಹಚರರ ಜೊತೆ ಸೇರಿ ಈ ಕೃತ್ಯ ನಡಿಸಿದ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇಂದು (ಜೂನ್​ 12) ಎಲ್ಲ ಆರೋಪಿಗಳನ್ನು ಘಟನಾ ಸ್ಥಳವಾದ ಪಟ್ಟಣಗೆರೆ ಶೆಡ್​ಗೆ ಕರೆದುಕೊಂಡು ಹೋಗಿ ಮಹಜರು ಮಾಡಲಾಯಿತು. ಬಳಿಕ ದರ್ಶನ್​ ಮತ್ತು ಸಹಚರರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ವಾಪಸ್​ ಕರೆದುಕೊಂಡು ಬರಲಾಯಿತು. ಈ ವೇಳೆ ದರ್ಶನ್​ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ದಾರಿಗೆ ದಡ್ಡ ಬಂದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ದರ್ಶನ್​ ಜೊತೆ ಪವಿತ್ರಾ ಗೌಡ ಸೇರಿ ಒಟ್ಟು 17 ಜನರ ಮೇಲೆ ಆರೋಪ ಬಂದಿದ್ದು, 13 ಜನರನ್ನು ಬಂಧಿಸಲಾಗಿದೆ. ನಾಪತ್ತೆ ಆಗಿರುವ 4 ಜನರಿಗೆ ಪೊಲೀಸರು ಬಲೆ ಬೀಸಿದ್ದಾರೆ.